ಕೃಷಿ ಮೂಲ ಸೌಕರ್ಯಕ್ಕೆ 1 ಲಕ್ಷ ಕೋಟಿ ರೂಪಾಯಿ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಕೃಷಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಇದು ಮೂರನೇ ಘೋಷಣೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದ್ರಿಂದ ಕೃಷಿಕರ ಆದಾಯದಲ್ಲೂ ಏರಿಕೆ ಕಂಡು ಬರಲಿದೆ ಎಂದಿದ್ದಾರೆ.
ಕೃಷಿ ಉತ್ಪನ್ನಗಳ ಮಾರಾಟಕ್ಕೆ 10 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆಯುರ್ವೇದ, ಸಾವಯವ, ಹರ್ಬಲ್ ಕೃಷಿ ಉತ್ಪನ್ನಗಳ ಸಾಗಾಟಕ್ಕೂ ಹಣದ ಸಹಾಯ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಎಲ್ಲ ದೇಶಿಯ ಆಹಾರ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ. ಕರ್ನಾಟಕದ ರಾಗಿ, ತಮಿಳುನಾಡಿನ ಅರಿಶಿನ ಹಾಗೂ ಕಾಶ್ಮೀರದ ಕೇಸರಿ ಸೇರಿದಂತೆ ಆಯಾ ಕ್ಷೇತ್ರಗಳ ಪ್ರಸಿದ್ಧ ದೇಶಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗೆ ಸರ್ಕಾರ ಒತ್ತು ನೀಡಲಿದೆ.