alex Certify BREAKING NEWS:‌ ಸುಪ್ರೀಂ ಕೋರ್ಟ್‌ ನಲ್ಲಿ ಮುನಿರತ್ನಗೆ ಬಿಗ್‌ ರಿಲೀಫ್‌ – ಉಪ ಚುನಾವಣೆಗಿಲ್ಲ ಅಡೆತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS:‌ ಸುಪ್ರೀಂ ಕೋರ್ಟ್‌ ನಲ್ಲಿ ಮುನಿರತ್ನಗೆ ಬಿಗ್‌ ರಿಲೀಫ್‌ – ಉಪ ಚುನಾವಣೆಗಿಲ್ಲ ಅಡೆತಡೆ

ಬೆಂಗಳೂರಿನ ಆರ್.‌ಆರ್. ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಮಾನ ಪ್ರಕಟಿಸಿದೆ. ಅರ್ಜಿದಾರ ತುಳಸಿ ಮುನಿರಾಜು ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಇದರಿಂದಾಗಿ ಮುನಿರತ್ನಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಸುಪ್ರೀಂ ಕೋರ್ಟ್‌ ನ ಈ ತೀರ್ಮಾನದಿಂದಾಗಿ ಈಗಾಗಲೇ ಘೋಷಣೆಯಾಗಿರುವ ಆರ್.‌ಆರ್.‌ ನಗರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ ನಿಗದಿಯಂತೆ ನಡೆಯಲಿದೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮುನಿರತ್ನ ಅವರಿಗೆ ಇನ್ನೂ ಹೈಕಮಾಂಡ್‌ ಹಸಿರು ನಿಶಾನೆ ತೋರಿಸಿಲ್ಲವಾದ ಮಧ್ಯೆ ಇಂದಿನ ಸುಪ್ರೀಂ ಕೋರ್ಟ್‌ ತೀರ್ಪು ಒಂದಷ್ಟು ಸಮಾಧಾನ ತಂದಿದೆ. ತುಳಸಿ ಮುನಿರಾಜು ಗೌಡ ಸಹ ಬಿಜೆಪಿ ಟಿಕೆಟ್‌ ಗಾಗಿ ಪ್ರಯತ್ನ ನಡೆಸಿದ್ದು, ಅಂತಿಮವಾಗಿ ಯಾರು ಕಣಕ್ಕಿಳಿಯಲಿದ್ದಾರೆಂಬುದು ಇಂದು ಅಥವಾ ನಾಳೆ ತೀರ್ಮಾನವಾಗುವ ಸಾಧ್ಯತೆ ಇದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...