ನವದೆಹಲಿ: ಲಾಕ್ ಡೌನ್ ನಡುವೆಯೂ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗಿದ್ದು ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.
ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳುವಂತೆ ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. ಆದರೆ ಮೇ 3ರ ನಂತರವೂ ಸಾರ್ವಜನಿಕ ಸಾರಿಗೆ ಮೇಲಿನ ನಿರ್ಬಂಧ ಮುಂದುವರೆಯಲಿದೆ.
ರೈಲು, ಬಸ್, ವಿಮಾನ, ಮೆಟ್ರೋ ಸೇರಿದಂತೆ ಎಲ್ಲ ಸಾರ್ವಜನಿಕ, ಸಾಮೂಹಿಕ ಸಾರಿಗೆಗಳ ನಿರ್ಬಂಧ ಮುಂದುವರೆಯಲಿದೆ. ಖಾಸಗಿ ವಾಹನಗಳ ಓಡಾಟಕ್ಕೆ ಅವಕಾಶವಿದ್ದರೂ ನಿರ್ಬಂಧಗಳು ಅನ್ವಯವಾಗುತ್ತವೆ. ಶಾಲೆ, ಕಾಲೇಜು, ಸಭೆ-ಸಮಾರಂಭಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.
ಇದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದ್ದು ಜಿಲ್ಲಾವಾರು ಸೋಂಕಿನ ಪರಿಸ್ಥಿತಿಯನ್ನು ಆಧರಿಸಿ ಕೆಲವು ಸೇವೆಗಳಿಗೆ ಷರತ್ತುಗಳೊಂದಿಗೆ ಅನುಮತಿ ನೀಡಲಾಗುವುದು. ಆರ್ಥಿಕತೆಗೆ ಚೈತನ್ಯ ನೀಡಲು ಸುಧಾರಣೆ ಕ್ರಮಗಳ ಜಾರಿಗೆ ಸರ್ಕಾರ ಮುಂದಾಗಿದ್ದು ಮಧ್ಯಮ ಮತ್ತು ಸಣ್ಣ ಕೈಗಾರಿಕಾ ವಲಯದ ಮೇಲಿನ ನಿರ್ಬಂಧ ಸಡಿಲಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.