alex Certify ಬಿಗ್ ನ್ಯೂಸ್: ಕೇಂದ್ರ ಸಂಪುಟಕ್ಕೆ ಮೇಜರ್ ಸರ್ಜರಿ – ಸಿಂಧಿಯಾಗೆ ಚಾನ್ಸ್ ಗ್ಯಾರಂಟಿ, ರಾಜ್ಯದಿಂದ ಒಬ್ಬರಿಗೆ ಅವಕಾಶ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೇಂದ್ರ ಸಂಪುಟಕ್ಕೆ ಮೇಜರ್ ಸರ್ಜರಿ – ಸಿಂಧಿಯಾಗೆ ಚಾನ್ಸ್ ಗ್ಯಾರಂಟಿ, ರಾಜ್ಯದಿಂದ ಒಬ್ಬರಿಗೆ ಅವಕಾಶ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸೆಪ್ಟಂಬರ್ ನಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದ್ದು, ಇತ್ತೀಚೆಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯಸಭೆ ಸದಸ್ಯರಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದು ಹೇಳಲಾಗಿದೆ.

ಸಂಪುಟಕ್ಕೆ ಜ್ಯೋತಿರಾಧಿತ್ಯ ಸಿಂಧಿಯಾ ಸೇರ್ಪಡೆಯಾಗುವುದು ಖಚಿತವಾಗಿದ್ದು, ಅವರಿಗೆ ಪ್ರಮುಖ ಹೊಣೆಗಾರಿಕೆ ಸಿಗಲಿದೆ ಎನ್ನಲಾಗಿದೆ.

ಇನ್ನು ರಾಜ್ಯದಿಂದ ಒಬ್ಬರಿಗೆ ಕೇಂದ್ರ ಸಂಪುಟಕ್ಕೆ ಎಂಟ್ರಿ ಸಿಗಬಹುದೆಂದು ಹೇಳಲಾಗಿದೆ. ಈಗಾಗಲೇ ರಾಜ್ಯದಿಂದ ಪ್ರಹ್ಲಾದ್ ಜೋಷಿ, ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಸಚಿವರಾಗಿದ್ದಾರೆ. ಇವರೊಂದಿಗೆ ಮತ್ತೊಬ್ಬರಿಗೆ ಅವಕಾಶ ಸಿಗಬಹುದೆಂದು ಹೇಳಲಾಗಿದೆ.

ಕಳೆದ ಬಾರಿ ಜಿ.ಎಂ. ಸಿದ್ದೇಶ್ವರ್, ಅನಂತ್ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಅವರಿಗೆ ಅವಕಾಶ ಸಿಕ್ಕಿತ್ತು. ಈ ಬಾರಿ ಇವರೊಂದಿಗೆ ಶಿವಕುಮಾರ್ ಉದಾಸಿ, ಬಿ.ವೈ. ರಾಘವೇಂದ್ರ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...