alex Certify ಛತ್ತೀಸಗಢದಲ್ಲಿ ಒಂದೇ ದಿನ ಆನೆ ದಾಳಿಗೆ ಮೂವರು ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಛತ್ತೀಸಗಢದಲ್ಲಿ ಒಂದೇ ದಿನ ಆನೆ ದಾಳಿಗೆ ಮೂವರು ಬಲಿ..!

ಛತ್ತೀಸ್​ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನೆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಾಥಲ್​ಗಾನ್​ ಅರಣ್ಯ ವಿಭಾಗದಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರಾಯ್​ತೋಲಾ ನಿವಾಸಿಯಾದ 50 ವರ್ಷದ ದಿಲ್​ಸಾಯ್​​ ರಾವ್​ ಚೌಹಾಣ್ ಡುಮರ್​ಬಹಾರ್​ ಗ್ರಾಮದಿಂದ ಕೆಲಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಆನೆ ದಾಳಿಗೆ ಬಲಿಯಾಗಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚಾರ ಮಾಡದಂತೆ ಮೊದಲೇ ಸೂಚನೆ ನೀಡಿದ್ದರೂ ಸಹ ನಿಯಮ ಉಲ್ಲಂಘಿಸಿದ ಚೌಹಾಣ್​ ಆನೆ ದಾಳಿಗೆ ಗುರಿಯಾಗಿದ್ದಾರೆ.

ಇನ್ನು 62 ವರ್ಷದ ಜಗತ್​ ರಾಮ್​ ಹಾಗೂ 65 ವರ್ಷದ ಕಾರು ಎಂಬವರು ಜಿಮ್ಕಿ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆನೆ ದಾಳಿಗೆ ಬಲಿಯಾಗಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 25 ಸಾವಿರ ರೂಪಾಯಿ ತುರ್ತು ಪರಿಹಾರ ನೀಡಲಾಗಿದೆ. ಉಳಿದ 5.75 ಲಕ್ಷ ರೂಪಾಯಿ ಪರಿಹಾರವನ್ನ ಬಳಿಕ ನೀಡಲಾಗುತ್ತೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...