alex Certify BIG NEWS: ತರಕಾರಿ ಮಾರುಕಟ್ಟೆಯಲ್ಲಿ ಕೊರೊನಾ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತರಕಾರಿ ಮಾರುಕಟ್ಟೆಯಲ್ಲಿ ಕೊರೊನಾ ಅಬ್ಬರ

दिल्ली का आजादपुर मंडी (फोटो-अनिल जा.सवाल)

ದೆಹಲಿ ಆಜಾದ್ಪುರ ಮಂಡಿಯಲ್ಲಿ 11 ತರಕಾರಿ ವ್ಯಾಪಾರಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದ್ರ ನಂತ್ರ ಅನೇಕ ಅಂಗಡಿಗಳ ಬಾಗಿಲು ಹಾಕಲಾಗಿದೆ. ವ್ಯಾಪಾರಿಗಳ ಸಂಪರ್ಕಕ್ಕೆ ಬಂದ ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆಜಾದ್ಪುರ ಮಂಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಾಪಾರಿಯೊಬ್ಬ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದ. ಇದಾದ ನಂತ್ರ ಆತನ ಸಂಪರ್ಕಕ್ಕೆ ಬಂದ ವ್ಯಾಪಾರಿಗಳ ಪರೀಕ್ಷೆ ನಡೆಸಲಾಗಿತ್ತು.

ಕೊರೊನಾ ಸೋಂಕು ತರಕಾರಿ ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3314 ಕ್ಕೆ ತಲುಪಿದ್ದು, ಅದರಲ್ಲಿ 54 ಜನರು ಸಾವನ್ನಪ್ಪಿದ್ದರೆ, 1078 ಜನರು ಗುಣಮುಖರಾಗಿದ್ದಾರೆ.

ದೆಹಲಿಯ ಸಿಆರ್‌ಪಿಎಫ್ ಸೈನಿಕ ಮೊಹಮ್ಮದ್ ಕೂಡ ಕೊರೊನಾಗೆ ಬಲಿಯಾಗಿದ್ದಾರೆ. ಇದಾದ ನಂತ್ರ ಸಿಆರ್‌ಪಿಎಫ್ ಬೆಟಾಲಿಯನ್ ಗೆ ಬೀಗ ಜಡಿಯಲಾಗಿದೆ. ಅವ್ರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...