ನವದೆಹಲಿ: ಜೂನ್, ಜುಲೈ ವೇಳೆಗೆ ಕೊರೋನಾ ತಾರಕಕ್ಕೇರಲಿದ್ದು ದೇಶದಲ್ಲಿ ಕೊರೋನಾ ಸ್ಫೋಟ ಸಂಭವಿಸುವ ಸಾಧ್ಯತೆ ಇದೆ.
ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದು, ದೇಶದಲ್ಲಿ 50 ಸಾವಿರ ಗಡಿ ದಾಟಿರುವ ಸೋಂಕಿತರ ಸಂಖ್ಯೆ ಮುಂದಿನ ಎರಡು ತಿಂಗಳಲ್ಲಿ ಗರಿಷ್ಠ ಪ್ರಮಾಣಕ್ಕೆ ತಲುಪಬಹುದು ಎಂದು ಹೇಳಿದ್ದಾರೆ.
ಮೇ ತಿಂಗಳಲ್ಲಿ ಕೊರೋನಾ ಸೋಂಕು ತಾರಕಕ್ಕೆ ಏರಲಿದ್ದು ನಂತರ ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಲಾಗಿತ್ತು. ಆದರೆ ಮುಂದಿನ ದಿನಗಳಲ್ಲಿ ಸೋಂಕಿನ ಪ್ರಕರಣ ಇನ್ನಷ್ಟು ಹೆಚ್ಚಾಗಲಿದೆ. ಇದೇ ರೀತಿ ಸೋಂಕು ಹರಡುತ್ತಿದ್ದರೆ ಜುಲೈ ವೇಳೆಗೆ ದೇಶದಲ್ಲಿ ಸೋಂಕಿತರ ಪ್ರಮಾಣ ದಿಢೀರ್ ಏರಿಕೆಯಾಗಲಿದೆ. ಲಾಕ್ ಡೌನ್ ನಂತರದಲ್ಲಿ ಸೋಂಕು ವೇಗವಾಗಿ ಹರಡುವುದು ಕಡಿಮೆಯಾಗಿದ್ದರೂ, ಪ್ರಮಾಣ ಕಡಿಮೆಯಾಗಿಲ್ಲ. ಇದೇ ರೀತಿ ಇದ್ದರೆ ಜುಲೈ ವೇಳೆಗೆ ಸೋಂಕಿತರ ಸಂಖ್ಯೆ 10 ಲಕ್ಷ ದಾಟಬಹುದು ಎನ್ನಲಾಗಿದೆ.