alex Certify BREAKING NEWS: ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿ

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.

ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಧಪಟ್ಟ ಹಿನ್ನೆಲೆಯಲ್ಲಿ ಕಳೆದ ವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಛೋಟಾ ರಾಜನ್ ಸಾವನ್ನಪ್ಪಿರುವುದಾಗಿ ಏಮ್ಸ್ ಆಸ್ಪತ್ರೆ ತಿಳಿಸಿದೆ.

ಭೂಗತ ಪಾತಕಿ ಛೋಟಾ ರಾಜನ್ ನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಆತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...