ನವದೆಹಲಿ: ಮಾರಕ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು, ಚಿಕಿತ್ಸೆ ಬಳಿಕ ರೋಗಿ ಚೇತರಿಸಿಕೊಂಡಿದ್ದಾರೆ.
ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ವೆಂಟಿಲೇರ್ ನಿಂದ ಹೊರ ಬಂದಿದ್ದಾರೆ. ಕೊರೋನಾ ಪೀಡಿತ ವ್ಯಕ್ತಿ ಸಂಪೂರ್ಣ ಚೇತರಿಸಿಕೊಂಡ ಬಳಿಕ ಆ ವ್ಯಕ್ತಿಯ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಇಂತಹ ವ್ಯಕ್ತಿಯ ರಕ್ತದ ಪ್ಲಾಸ್ಮಾ ತೆಗೆದು ಅದನ್ನು ಬೇರೆ ರೋಗಿಗೆ ನೀಡಲಾಗುತ್ತದೆ. ಈ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚಿಸಲಾಗುತ್ತದೆ. ಈ ವಿಧಾನದಲ್ಲಿ ದೆಹಲಿಯಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದು, ಅವರು ಚೇತರಿಸಿಕೊಂಡಿದ್ದಾರೆ.
ಇದು ದೇಶದಲ್ಲಿ ಕೊರೋನಾ ಸೋಂಕಿತರಿಗೆ ನೀಡಿದ ಮೊದಲ ಪ್ಲಾಸ್ಮಾ ಥೆರಪಿ ದೆಹಲಿಯ ಸಾಕೇತ್ ಪ್ರದೇಶದ ಮ್ಯಾಕ್ಸ್ ಆಸ್ಪತ್ರೆಯಲ್ಲಿ 49 ವರ್ಷದ ರೋಗಿಯ ಆರೋಗ್ಯದ ಹದಗೆಟ್ಟಿದ್ದು ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.