alex Certify ಕಣ್ಣೆದುರೇ ತಂದೆ ಸಾವು: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಯುವತಿಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣೆದುರೇ ತಂದೆ ಸಾವು: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಯುವತಿಯ ಆಕ್ರೋಶ

ಆಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದಾರೆ ಎಂಬ ಕಾರಣಕ್ಕೆ ಕೊರೊನಾ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡದ ಕಾರಣ ರೋಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ.

ಜಾರ್ಖಂಡ್​​ ಆರೋಗ್ಯ ಸಚಿವ ಬನ್ನಾ ಗುಪ್ತಾ ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರಣ ಕೊರೊನಾ ರೋಗಿಯನ್ನ ದಾಖಲು ಮಾಡಿಕೊಳ್ಳುವಲ್ಲಿ ವಿಳಂಬವಾಗಿದೆ. ಇದರಿಂದ ವೃದ್ಧ ಕೋವಿಡ್​ ಸೋಂಕಿತ ಸಾವನ್ನಪ್ಪಿದ್ದಾರೆ.

ಸ್ಥಳೀಯ ಮಾಧ್ಯಮಗಳು ಬಿತ್ತರಿಸಿದ ವರದಿ ಪ್ರಕಾರ, ಲವಕುಮಾರ್​ ಗುಪ್ತಾ ಎಂಬವರನ್ನ ರಾಂಚಿ ಸರ್ದಾರ್​ ಆಸ್ಪತ್ರೆಗೆ ಕರೆತರಲಾಗಿತ್ತು. ಗುಪ್ತಾ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್​ ಖಾಲಿ ಇರದ ಕಾರಣ ಅವರನ್ನು ಈ ಆಸ್ಪತ್ರೆಗೆ ಕರೆತರಲಾಗಿತ್ತು.

ಈ ಆಸ್ಪತ್ರೆಗೆ ಸಚಿವ ಬನ್ನಾ ಗುಪ್ತಾ ಪರಿಶೀಲನೆ ನಡೆಸಲು ಆಗಮಿಸಿದ್ದರು. ಇದರಿಂದ ಸ್ಟ್ರೆಚರ್​ಗಾಗಿ ವೃದ್ಧ ಸೋಂಕಿತ ಗಂಟೆಗಟ್ಟಲೇ ಕಾಯುವಂತಾಯ್ತು. ಗುಪ್ತಾರನ್ನ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುವಲ್ಲಿ ಬಹಳ ವಿಳಂಬವಾದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಮೃತ ಗುಪ್ತಾರ ಪುತ್ರಿ ಆಕ್ರೋಶ ಹೊರಹಾಕಿದ್ದಾರೆ.

— ANI (@ANI) April 13, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...