alex Certify BIG NEWS: ಕೊರೊನಾ ಸೋಂಕಿತ ಕೈದಿಗಳು ಆಸ್ಪತ್ರೆಯಿಂದ ಎಸ್ಕೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತ ಕೈದಿಗಳು ಆಸ್ಪತ್ರೆಯಿಂದ ಎಸ್ಕೇಪ್

ಲಕ್ನೋ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಕೈದಿಗಳು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ನಲ್ಲಿ ನಡೆದಿದೆ.

ಜೈಲಿನಲ್ಲಿದ್ದ ನಾಲ್ವರು ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಡಿಸೆಂಬರ್ 19ರಂದು ಕೈದಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆಸ್ಪತ್ರೆಗೆ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗಿತ್ತು. ಆದರೂ ಚಿಕಿತ್ಸೆ ಪಡೆಯುತ್ತಿದ್ದ ಕೈದಿಗಳು ಆಸ್ಪತ್ರೆಯ ರೂಫ್ ಡೋರ್ ಮೂಲಕ ಎಸ್ಕೇಪ್ ಆಗಿದ್ದಾರೆ.

ಮಾಹಿತಿ ತಿಳಿಯುತ್ತಿದಂತೆಯೇ ಎಚ್ಚೆತ್ತ ಪೊಲೀಸರು ಇದೀಗ ಮೂವರು ಕೈದಿಗಳನ್ನು ಬಂಧಿಸಿ ಮತ್ತೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಓರ್ವ ಕೈದಿ ತಲೆಮರೆಸಿಕೊಂಡಿದ್ದಾನೆ ಎಂದು ಬುಲಂದರ್ ಶಹರ್ ಎಸ್.ಪಿ. ಸಂತೋಷ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...