ಕೊಲ್ಲತ್ತಾ: ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ 72 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕುರಿತು ಮಾಹಿತಿ ನೀಡಿದ್ದು, ಕೊಲ್ಕತ್ತಾದಲ್ಲಿ 15 ಮಂದಿ ಸಾವನ್ನಪ್ಪಿದ್ದು, ಉಳಿದ ಐದು ಜಿಲ್ಲೆಗಳಲ್ಲಿ ಹೆಚ್ಚು ಸಾವು-ನೋವು ಉಂಟಾಗಿದೆ ಎಂದು ಹೇಳಿದ್ದಾರೆ.
ಚಂಡಮಾರುತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದು, ಪ್ರಧಾನಿಯವರು ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.