ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮೇಲೆಯೂ ಪರಿಣಾಮ ಉಂಟಾಗಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ. ಇದೇ ವೇಳೆ ಪಿಂಚಣಿದಾರರ ಭತ್ಯೆಗೂ ಬ್ರೇಕ್ ಹಾಕಲಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದ ಸರ್ಕಾರ ನಿರ್ಧಾರ ಕೈಗೊಂಡಿದ್ದು ಬೊಕ್ಕಸಕ್ಕೆ 37 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ.
ಮುಂದಿನ ವರ್ಷದ ಜುಲೈ 1ರವರೆಗೆ ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳ ಮಾಡುವುದಿಲ್ಲ ಎನ್ನಲಾಗಿದೆ. 2020 ರ ಜನವರಿ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಬೇಕಿತ್ತು. ತುಟ್ಟಿ ಭತ್ಯೆ ಹೆಚ್ಚಳ ತೀರ್ಮಾನವನ್ನು ಕೈಗೋಳ್ಳಲಾಗಿತ್ತು. ಈಗ ನಿರ್ಧಾರ ಬದಲಿಸಲಾಗಿದೆ.
ಇದರಿಂದಾಗಿ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಶೇಕಡಾ 17 ರಷ್ಟು ತುಟ್ಟಿಭತ್ಯೆ ಪಡೆಯಲಿದ್ದಾರೆ. ಲಾಕ್ಡೌನ್ ಜಾರಿಗೆ ಮೊದಲು ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ತೀರ್ಮಾನಿಸಲಾಗಿತ್ತು. 2021ರ ಜನವರಿಯಿಂದಲೇ ಶೇಕಡ 21 ರಷ್ಟು ತುಟ್ಟಿಭತ್ಯೆ ಪಡೆಯಬೇಕಿತ್ತು. ಆದರೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಳಕ್ಕೆ ಬ್ರೇಕ್ ಹಾಕಲಾಗಿದೆ.