alex Certify ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೀಡಾದ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೀಡಾದ ನಟ

ನವದೆಹಲಿ: ಜನವರಿ 26ರಂದು ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕೆಂಪು ಕೋಟೆಯ ಮೇಲೆ ನಡೆದ ದಾಂಧಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟ ದೀಪ್ ಸಿಧುಗೆ ಇಂದು ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಬಿಡುಗಡೆಯಾಗಿದ್ದ ದೀಪ್ ಸಿಧುನನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿರುವ ಘಟನೆ ನಡೆದಿದೆ.

ದೆಹಲಿ ಹಿಂಸಾಚಾರ ಪ್ರಕರಣ ಹಾಗೂ ಕೆಂಪು ಕೋಟೆ ಮೇಲೆ ಸಿಖ್ ಧ್ವಜಾರೋಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಬ್ರವರಿ 9ರಂದು ಬಂಧನಕ್ಕೀಡಾಗಿದ್ದ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಈಗ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜನವರಿ 26ರಂದು ನಡೆದ ಘಟನೆಯಲ್ಲಿ ದೆಹಲಿ ಕೆಂಪು ಕೋಟೆಗೆ ಹಾನಿಯುಂಟು ಮಾಡಲಾಗಿದೆ ಎಂದು ಆರ್ಕಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ದೀಪ್ ಸಿಧು ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪ್ ಸಿಧುರನ್ನು ಮತ್ತೆ ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...