ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕನ ಕಿರುಕುಳಕ್ಕೆ ಬೇಸತ್ತು ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ತಮ್ಮ ಆತ್ಮಹತ್ಯೆಗೆ ಕಾರಣರಾದ ಶಾಸಕನ ಬಗ್ಗೆ ಮಾಹಿತಿ ನೀಡಿದ್ದಾರೆ.
ದೆಹಲಿಯ ನೆಬ್ ಸರಾಯ್ ಪ್ರದೇಶದ ವೈದ್ಯರಾದ ರಾಜೇಂದ್ರ ಸಿಂಗ್ ನೀರು ಸರಬರಾಜು ಟ್ಯಾಂಕರ್ ವ್ಯವಹಾರ ನಡೆಸುತ್ತಿದ್ದು, ಈ ವ್ಯವಹಾರದಲ್ಲಿ ತಮಗೆ ಕಮಿಷನ್ ಕೊಡಬೇಕೆಂದು ಆಮ್ ಆದ್ಮಿ ಪಕ್ಷದ ಶಾಸಕ ಪ್ರಕಾಶ್ ಜರ್ವಾಲ್ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಡೆತ್ ನೋಟ್ ನಲ್ಲಿ ಶಾಸಕನ ಕಿರುಕುಳದ ಬಗ್ಗೆ ರಾಜೇಂದ್ರ ಸಿಂಗ್ ಬರೆದಿಟ್ಟಿದ್ದು, ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೈರಿಯಲ್ಲಿಯೂ ಶಾಸಕನ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.