ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಕಾರಣಕ್ಕೆ 2021ರ ಜುಲೈವರೆಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಸಶಸ್ತ್ರ ಪಡೆ ಸಿಬ್ಬಂದಿಗೆ ತುಟ್ಟಿಭತ್ಯೆ ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿ ನೌಕರರು ಮತ್ತು ಸಶಸ್ತ್ರ ಪಡೆಯ ಸಿಬ್ಬಂದಿಯ ಮೇಲೆ ಕಷ್ಟಗಳನ್ನು ಹೇರುವುದು ಸರಿಯಲ್ಲ, ಇದು ದಡ್ಡತನದ ನಿರ್ಧಾರ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ತುಟ್ಟಿಭತ್ಯೆ ತಡೆಗೆ ಮುಂದಾದ ಕೇಂದ್ರದ ಕ್ರಮವನ್ನು ಖಂಡಿಸಿದ್ದು, ಬುಲೆಟ್ ರೈಲು ಯೋಜನೆಗೆ ಅತಿಯಾದ ಖರ್ಚು ಮಾಡಲಾಗುತ್ತಿದೆ. ಈ ಸಮಯದಲ್ಲಿ ಆರ್ಥಿಕ ಹೊರೆಯಿಂದ ಪರಿಹಾರವಾಗಿ ಮಧ್ಯಮ ವರ್ಗದಿಂದ ಹಣ ಪಡೆಯಲಾಗುತ್ತಿದೆ. ಇದು ಅಮಾನವೀಯ ಎಂದು ಆರೋಪಿಸಿದ್ದಾರೆ.