alex Certify ಕ್ಷುಲ್ಲಕ ಕಾರಣಕ್ಕೆ ದೇಗುಲದ ಬಾಗಿಲಲ್ಲೇ ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ದೇಗುಲದ ಬಾಗಿಲಲ್ಲೇ ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..!

ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ವರ್ತನೆಯಿಂದ ಆತ ಕುಡಿದಿದ್ದಾನೆ ಎಂದು ಶಂಕಿಸಿದ ಗ್ರಾಮಸ್ಥರು ವ್ಯಕ್ತಿಯನ್ನ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಹರಿ ಸಂಕೀರ್ತನಕ್ಕೆ ಹಾಜರಾಗಿದ್ದ ವ್ಯಕ್ತಿ ಕುಡಿದಿದ್ದಾನೆ ಎಂದು ಭಾವಿಸಿದ ಗುಂಪು ಆತನಿಗೆ ದೇವಾಲಯದ ಒಳಗೆ ಹಾಗೂ ಹೊರಗೆ ಚೆನ್ನಾಗಿ ಥಳಿಸಿದ್ದಾರೆ. ನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಕೆಲವೇ ಗಂಟೆಗಳಲ್ಲಿ ಸಾವಿಗೀಡಾಗಿದ್ದಾನೆ.

ಉತ್ತರಾಖಂಡ್​ನ ರುದ್ರಾಪುರದ ನಿವಾಸಿ 29 ವರ್ಷದ ಜಾನಿ ಸಾಗರ್​ ಕೊಲೆಯಾದ ವ್ಯಕ್ತಿ. ಇನ್ನು ಈ ಸಂಬಂಧ ಮಾಹಿತಿ ನೀಡಿರುವ ಸಾಗರ್​ ಪತ್ನಿ, ನನ್ನ ಪತಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ನನ್ನ ಪತಿ ಕುಡಿದಿದ್ದಾರೆ ಎಂದು ಆರೋಪಿಸಿ ಅವರನ್ನ ಕೊಲೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾಳೆ. ಈ ಸಂಬಂಧ ಮೃತನ ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ.

ರುದ್ರಾಪುರ ಎಸ್​​ಹೆಚ್​ಒ ಈ ವಿಚಾರವಾಗಿ ಮಾತನಾಡಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ವ್ಯಕ್ತಿ ಗಂಭೀರ ಗಾಯದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಮೃತ ವ್ಯಕ್ತಿ ಕುಡಿದಿದ್ದ ಅನ್ನೋದ್ರ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...