ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ನಡುವೆ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭೂಕಂಪನವಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.
ನವದೆಹಲಿ ಮಾತ್ರವಲ್ಲದೆ ನೋಯ್ಡಾ ಹಾಗೂ ಗುರುಗ್ರಾಮದಲ್ಲೂ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎನ್ನಲಾಗಿದೆ.
ಈ ಕಂಪನದಿಂದ ಆಗಿರುವ ಹಾನಿ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.