alex Certify ಹೈಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಚುನಾವಣಾ ಆಯೋಗ: ಫಲಿತಾಂಶ ಬಳಿಕದ ವಿಜಯೋತ್ಸವಕ್ಕೆ ಬಿತ್ತು ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಚುನಾವಣಾ ಆಯೋಗ: ಫಲಿತಾಂಶ ಬಳಿಕದ ವಿಜಯೋತ್ಸವಕ್ಕೆ ಬಿತ್ತು ಬ್ರೇಕ್

ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಮೇ 2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ.

ದೇಶದಲ್ಲಿ ಕೊರೊನಾ ವೈರಸ್​ ಇನ್ನೂ ಇರುವಾಗಲೇ ಚುನಾವಣಾ ರ್ಯಾಲಿಗಳಿಗೆ ಅನುಮತಿ ನೀಡಿದ್ದ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್​ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್​ ಹಾಕಬಹುದು ಎಂತಲೂ ಆಕ್ರೋಶ ಹೊರಹಾಕಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಚುನಾವಣಾ ಆಯೋಗ ಇದೀಗ ವಿಜಯದ ಸಂಭ್ರಮಾಚರಣೆಗೆ ಕೊಕ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...