alex Certify ಕುತೂಹಲದ ಬೆಳವಣಿಗೆ: ಮಾಜಿ ಸಿಎಂ ನಿವಾಸಕ್ಕೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲದ ಬೆಳವಣಿಗೆ: ಮಾಜಿ ಸಿಎಂ ನಿವಾಸಕ್ಕೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭೇಟಿ

ಶ್ರೀನಗರ: 14 ತಿಂಗಳ ಗೃಹಬಂಧನದಿಂದ ಮಂಗಳವಾರ ರಾತ್ರಿ ಬಿಡುಗಡೆಯಾದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನಿವಾಸಕ್ಕೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ ಭೇಟಿ ನೀಡಿದ್ದಾರೆ.

ಶ್ರೀನಗರದಲ್ಲಿರುವ ಮಾಜಿ ಸಿಎಂ ಮೆಹಬೂಬಾ ಮುಫ್ತಿ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಧೈರ್ಯ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ ಅವರು, ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರು ನಮ್ಮ ಮನೆಗೆ ಭೇಟಿ ನೀಡಿದ್ದು ಸಂತೋಷ ತಂದಿದೆ. ಅವರ ಮಾತುಗಳು ಧೈರ್ಯ ತಂದಿದೆ. ನಾವು ಒಟ್ಟಾಗಿ ಬದಲಾವಣೆಗೆ ಹೋರಾಟ ನಡೆಸುವ ಖಾತ್ರಿ ಇದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮರು ಸ್ಥಾಪನೆಗಾಗಿ ಹೋರಾಟ ಮುಂದುವರೆಸಲಾಗುವುದು ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...