alex Certify BIG NEWS: ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಕೊರೊನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಹಾಡಿಯಾ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪಹಾಡಿಯಾ ನಿಧನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದು, ಪಹಾಡಿಯಾ ಕೋವಿಡ್ ಗೆ ಬಲಿಯಾಗಿರುವ ಸುದ್ದಿ ಆಘಾತ ತಂದಿದೆ. ಅವರು ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿಯೂ ದೇಶಕ್ಕೆ ಸಲ್ಲಿಸಿದ ಸೇವೆ ಅಪಾರ. ಪಹಾಡಿಯಾ ಅಗಲಿಕೆಯಿಂದ ದೇಶ ಓರ್ವ ಹಿರಿಯ ನಾಯಕನನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಗೆ ಕೊರೊನಾ ಶಾಕ್: ಕೋವಿಡ್ ಬಿಕ್ಕಟ್ಟಿನಿಂದ 7 ವರ್ಷದಲ್ಲೇ ಮೊದಲ ಬಾರಿಗೆ ಕುಸಿದ ಮೋದಿ ಜನಪ್ರಿಯತೆ

ಅಲ್ಲದೇ ರಾಜಸ್ಥಾನದಲ್ಲಿ ಒಂದು ದಿನದ ಶೋಕಾಚರಣೆ ಘೋಷಿಸಿದ್ದು, ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗಿದೆ.

ಜಗನ್ನಾಥ್ ಪಹಾಡಿಯಾ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ರಾಜಕೀಯ, ಆಡಳಿತಾತ್ಮಕ ಸಾಮಾಜಿಕ ಸಬಲೀಕರಣಕ್ಕೆ ಪಹಾಡಿಯಾ ಅಪಾರ ಕೊಡುಗೆ ನೀಡಿದ್ದರು ಎಂದು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...