ನವದೆಹಲಿ: ಕೊರೋನಾ ಬಿಕ್ಕಟ್ಟು ನಿವಾರಣೆಗೆ ರಾಜ್ಯಗಳಲ್ಲಿ ಆದಾಯ ಕೊರತೆ ಸರಿದೂಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ 6000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕೇರಳಕ್ಕೆ 1276 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 952 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಆಂಧ್ರಪ್ರದೇಶ 491 ಕೋಟಿ ರೂಪಾಯಿ ನೀಡಲಾಗಿದ್ದು ಈ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲವಾಗಿದೆ. ಕೊರೋನಾ ಬಿಕ್ಕಟ್ಟು ನಿವಾರಣೆ ಕಾರ್ಯಕ್ಕೆ ಈ ಹಣ ನೆರವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಅನೇಕ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದ್ದರೂ, ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗಿದೆ.