ನವದೆಹಲಿ: ರಾಜ್ಯ ಸರ್ಕಾರವೇ ಲಾಕ್ಡೌನ್ ಕುರಿತಾಗಿ ತೀರ್ಮಾನ ಕೈಗೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲಾಕ್ಡೌನ್ ನಾಲ್ಕನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು, ವಾಹನಗಳಲ್ಲಿ ಅಂತರರಾಜ್ಯ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ, ರಾಜ್ಯದೊಳಗೆ ಸಾರಿಗೆ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರಗಳೇ ತೀರ್ಮಾನ ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಬಂಧ ವಿಧಿಸಬಹುದು. ಎಲ್ಲ ಉದ್ಯೋಗಿಗಳು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು. ಮದುವೆ ಸಮಾರಂಭಕ್ಕೆ 50 ಜನರಿಗೆ ಮಾತ್ರ ಅವಕಾಶ ಇರಬೇಕು. ಸಂಜೆ 7 ರಿಂದ 7 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧವಿರುತ್ತದೆ.
ಶಾಲೆ – ಕಾಲೇಜು ಬಂದ್ ಮುಂದುವರೆಯಲಿದೆ. ಹೋಟೆಲ್, ರೆಸ್ಟೋರೆಂಟ್, ಚಿತ್ರಮಂದಿರ ಸ್ಥಗಿತ, ವಿಮಾನಯಾನ ಸಂಚಾರ ಸಂಪೂರ್ಣ ನಿರ್ಬಂಧವಿರುತ್ತದೆ.
ನಾಲ್ಕನೇ ಹಂತದ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಅಂತ್ಯಸಂಸ್ಕಾರಕ್ಕೆ ಕೇವಲ 20 ಜನ ಮಾತ್ರ ಭಾಗಿಯಾಗಬಹುದು ಎಂದು ಹೇಳಲಾಗಿದೆ.
ಮದ್ಯ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ವೈನ್ ಸ್ಟೋರ್, ಎಂಎಸ್ಐಎಲ್, ಎಂಆರ್ಪಿ ಮಳಿಗೆಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಬಹುದು. ಸಾರ್ವಜನಿಕ, ಕೆಲಸದ ಸ್ಥಳದಲ್ಲಿ ಮದ್ಯ ಗುಟ್ಕಾ, ತಂಬಾಕು ಸೇವನೆಗೆ ಅವಕಾಶ ಇರುವುದಿಲ್ಲ.