alex Certify ಸಾಮಾಜಿಕ ಜಾಲತಾಣಗಳು ದುರ್ಬಳಕೆಯಾದರೆ ಕಠಿಣ ಕ್ರಮ: ಕೇಂದ್ರ ಸರ್ಕಾರದಿಂದ ಖಡಕ್ ವಾರ್ನಿಂಗ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣಗಳು ದುರ್ಬಳಕೆಯಾದರೆ ಕಠಿಣ ಕ್ರಮ: ಕೇಂದ್ರ ಸರ್ಕಾರದಿಂದ ಖಡಕ್ ವಾರ್ನಿಂಗ್…!

ಹಿಂಸಾಚಾರವನ್ನ ಪ್ರಚೋದಿಸುವಂತವ ಹಾಗೂ ನಕಲಿ ಸುದ್ದಿಗಳನ್ನ ಹರಡಿ ದೇಶದ ಶಾಂತಿಗೆ ಭಂಗ ತರುವ ಸಲುವಾಗಿ ಸಾಮಾಜಿಕ ಜಾಲತಾಣಗಳನ್ನ ದುರುಪಯೋಗಪಡಿಸಿಕೊಂಡರೆ ಅಂಥವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ.

ಭಾರತದಲ್ಲಿ ಯಾವುದೇ ವಿಚಾರದ ಬಗ್ಗೆ ಆರೋಗ್ಯಕರ ಚರ್ಚೆ ನಡೆಸಲು ಸಂವಿಧಾನದಲ್ಲೇ ಅವಕಾಶ ನೀಡಲಾಗಿದೆ. ಆದರೆ ಟ್ವಿಟರ್​, ಫೇಸ್​ಬುಕ್, ಲಿಂಕ್ಡ್​ ಇನ್​ ಅಥವಾ ವಾಟ್ಸಾಪ್​ ಹೀಗೆ ಸಾಮಾಜಿಲ ಜಾಲತಾಣದಲ್ಲಿ ನಕಲಿ ಸುದ್ದಿಗಳನ್ನ ಹಬ್ಬಿಸಿದ್ರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

ನೀವು ನಮ್ಮ ದೇಶಕ್ಕಾಗಿಯೇ ಕೆಲಸ ಮಾಡುತ್ತಿರಬಹುದು. ಕೋಟ್ಯಂತರ ಅನುಯಾಯಿಗಳನ್ನೂ ನೀವು ಸಾಮಾಜಿಕ ಜಾಲತಾಣದ ವೇದಿಕೆಯಲ್ಲಿ ಹೊಂದಿರಬಹುದು. ಆದರೆ ಇವೆಲ್ಲದರ ನಡುವೆ ಸರ್ಕಾರದ ಕಾನೂನು ಹಾಗೂ ಭಾರತದ ಸಂವಿಧಾನವನ್ನ ನೀವು ಗೌರವಿಸಲೇಬೇಕು ಎಂದು ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ ಹೇಳಿದ್ದಾರೆ.

ರೈತ ಪ್ರತಿಭಟನೆ ವಿಚಾರದಲ್ಲಿ ನಕಲಿ ಸುದ್ದಿಗಳನ್ನ ಹಬ್ಬಿಸಿದ ಟ್ವಿಟರ್ ಖಾತೆಗಳನ್ನ ಬ್ಯಾನ್​ ಮಾಡಿದ ವಿಚಾರವಾಗಿ ಮಾತನಾಡುತ್ತಾ ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ ಈ ಎಚ್ಚರಿಕೆಯನ್ನ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...