ನವದೆಹಲಿ: ಲಾಕ್ ಡೌನ್ ಸಂತ್ರಸ್ತರಿಗೆ ಊರಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
ಲಾಕ್ಡೌನ್ ಜಾರಿಯಾದ ನಂತರ ಅಲ್ಲಲ್ಲಿ ಉಳಿದುಕೊಂಡಿರುವ ಕಾರ್ಮಿಕರು, ಭಕ್ತರು, ಪ್ರವಾಸಿಗರು, ವಿದ್ಯಾರ್ಥಿಗಳು ಊರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಸಲು ಅವಕಾಶ ನೀಡಿದ್ದು, ಇದರಿಂದಾಗಿ ಊರಿಗೆ ಮರಳಲು ಸಾಧ್ಯವಾಗದವರಿಗೆ ರಿಲೀಫ್ ಸಿಕ್ಕಿದೆ.
ಸಂತ್ರಸ್ತರು ಊರಿಗೆ ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ಅಲ್ಲಲ್ಲೇ ಉಳಿದುಕೊಂಡಿರುವ ಕಾರ್ಮಿಕರು, ಭಕ್ತರು, ಪ್ರವಾಸಿಗರು, ವಿದ್ಯಾರ್ಥಿಗಳು ಊರಿಗೆ ಹೋಗಲು ಕೇಂದ್ರ ಸರ್ಕಾರದಿಂದ ಪರಿಷ್ಕೃತ ಗೈಡ್ ಲೈನ್ ಪ್ರಕಟಿಸಲಾಗಿದೆ. ಸಂತ್ರಸ್ತರಿಗೆ ಕೊರೋನಾ ಲಕ್ಷಣ ಇರಬಾರದು. ಆರೋಗ್ಯ ಪರೀಕ್ಷೆ ಕಡ್ಡಾಯವಾಗಿದೆ ಎಂದು ಗೈಡ್ ಲೈನ್ ನಲ್ಲಿ ಉಲ್ಲೇಖಿಸಲಾಗಿದೆ.