ಅಹಮದಾಬಾದ್: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಸಚಿವನ ಆಯ್ಕೆ ಅಸಿಂಧು ಎಂದು ಘೋಷಿಸಿದೆ.
ಗುಜರಾತ್ ನ ಧೋಲ್ಕಾ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವ ಶಿಕ್ಷಣ ಸಚಿವ ಭೂಪೇಂದ್ರ ಸಿನ್ಹಾ ಚುಡಾಸಮಾ ಅವರ ಆಯ್ಕೆಯನ್ನು ಅಸಿಂಧು ಎಂದು ತೀರ್ಪು ನೀಡಿದ್ದು ಬಿಜೆಪಿಗೆ ಹಿನ್ನಡೆಯಾಗಿದೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಧೋಲ್ಕಾ ಕ್ಷೇತ್ರದಿಂದ ಭೂಪೇಂದ್ರ ಸಿನ್ಹಾ ಆಯ್ಕೆಯಾಗಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಅಶ್ವಿನಿ ರಾಥೋಡ್ ದೂರು ನೀಡಿದ್ದು ಅವರ ವಾದವನ್ನು ಪರಿಗಣಿಸಿದ ನ್ಯಾಯಮೂರ್ತಿ ಪರೇಶ್ ಉಪಾಧ್ಯ 429 ಅಂಚೆ ಮತಗಳನ್ನು ಕಾನೂನು ಬಾಹಿರವಾಗಿ ರದ್ದುಪಡಿಸಲಾಗಿದೆ ಎನ್ನುವ ಅಶ್ವಿನಿ ರಾಥೋಡ್ ಅವರ ವಾದವನ್ನು ಎತ್ತಿ ಹಿಡಿದಿದೆ.
ಮತ ಎಣಿಕೆಯಲ್ಲಿ ಚುನಾವಣೆ ಆಯೋಗದ ಸೂಚನೆ ಉಲ್ಲಂಘನೆ ಮಾಡಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ವಿಚಾರಣೆ ನಡೆಸಿದ ಕೋರ್ಟ್ ಭೂಪೇಂದ್ರ ಸಿನ್ಹಾ ಆಯ್ಕೆಯನ್ನು ಅಸಿಂಧುಗೊಳಿಸಿದೆ.