ಶೈಕ್ಷಣಿಕ ಸಾಲ ಪಡೆದು ಶಿಕ್ಷಣ ಪೂರೈಸಿದ್ದ ವಿದ್ಯಾರ್ಥಿಗಳಿಗೆ ಹರಿಯಾಣ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಸಾಲದ ಮೇಲಿನ ಮೂರು ತಿಂಗಳ ಬಡ್ಡಿಯನ್ನು ಭರಿಸಲು ಸರ್ಕಾರ ತೀರ್ಮಾನಿಸಿದೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಈ ವಿಷಯ ತಿಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಪೂರೈಸಿದವರು ಹಾಗೂ ಕಳೆದ ವರ್ಷ ಶಿಕ್ಷಣ ಪೂರೈಸಿ ಉದ್ಯೋಗ ಸಿಗದೇ ಇರುವವರ ಶೈಕ್ಷಣಿಕ ಸಾಲದ ಮೇಲಿನ ಮೂರು ತಿಂಗಳ ಬಡ್ಡಿಯನ್ನು ಭರಿಸಲಿದ್ದೇವೆ ಎಂದು ಹೇಳಿದ್ದಾರೆ.
ಹರಿಯಾಣ ರಾಜ್ಯದ ಸುಮಾರು 36000 ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗಲಿದೆ ಎನ್ನಲಾಗಿದ್ದು, ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ 40 ಕೋಟಿ ರೂಪಾಯಿ ಮೀಸಲಿಟ್ಟಿದೆ. ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.