ಕೊರೊನಾ ವೈರಸ್ ಲಾಕ್ ಡೌನ್ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ ಮಹತ್ವದ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದ್ರ ಮಧ್ಯೆ ನರೇಂದ್ರ ಮೋದಿ ದೇಶಿ ವಸ್ತುಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ.
ಸ್ವಾವಲಂಬಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಈ ದಿಕ್ಕಿನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.
ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಕ್ಯಾಂಟೀನ್ಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಲು ಗೃಹ ಸಚಿವಾಲಯ ನಿರ್ಧರಿಸಿದೆ. ಈ ಆದೇಶವು ಜೂನ್ 1 ರಿಂದ ದೇಶದಾದ್ಯಂತ ಎಲ್ಲಾ ಕ್ಯಾಂಟೀನ್ಗಳಿಗೆ ಅನ್ವಯಿಸುತ್ತದೆ. ಸುಮಾರು 10 ಲಕ್ಷ ಸಿಎಪಿಎಫ್ ಸಿಬ್ಬಂದಿಯ 50 ಲಕ್ಷ ಕುಟುಂಬಗಳು ಸ್ಥಳೀಯ ವಸ್ತುಗಳನ್ನು ಬಳಸುತ್ತಾರೆ ಎಂದು ಅಂದಾಜಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ಥಳೀಯ ಉತ್ಪನ್ನಗಳನ್ನು (ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು) ಬಳಸುವಂತೆ ಮನವಿ ಮಾಡಿದ್ದರು. ಇದು ಭವಿಷ್ಯದಲ್ಲಿ ಭಾರತವನ್ನು ಮುನ್ನಡೆಸಲು ಖಂಡಿತವಾಗಿಯೂ ಸಹಾಯ ಮಾಡುತ್ತದೆ. ಈ ದಿಕ್ಕಿನಲ್ಲಿ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಕ್ಯಾಂಟೀನ್ಗಳು ಈಗ ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುತ್ತವೆ ಎಂದವರು ಹೇಳಿದ್ದಾರೆ.