alex Certify ಬಾಬಾ ರಾಮ್​ದೇವ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಬಾ ರಾಮ್​ದೇವ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಭಾರತೀಯ ವೈದ್ಯಕೀಯ ಸಂಘ ಹಾಗೂ ಯೋಗಗುರು ಬಾಬಾ ರಾಮದೇವ್​ ನಡುವಿನ ವಿವಾದ ತಾರಕಕ್ಕೇರಿದೆ. ಅಲೋಪಥಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮದೇವ್​ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಗುರುವಾರ ಎಫ್​ಐಆರ್​ ದಾಖಲಿಸಿದೆ.

ನಾವು ದೂರನ್ನ ಸ್ವೀಕರಿಸಿದ್ದು ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ದೆಹಲಿ ಪೊಲೀಸ್​ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೂರಿನಲ್ಲಿ : ಕೊರೊನಾ ಪರಿಸ್ಥಿತಿಯ ಲಾಭ ಪಡೆದ ಬಾಬಾ ರಾಮದೇವ್​ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಅಲೋಪಥಿ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಘ ಈ ವಿಚಾರವಾಗಿ ಈಗಾಗಲೇ ಪ್ರಧಾನಿ ಮೋದಿಯವರಿಗೂ ಪತ್ರವನ್ನ ಬರೆದಿದೆ. ಕೋವಿಡ್​ 19 ಚಿಕಿತ್ಸೆಯ ವಿರುದ್ಧ ಜನರಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವ ಬಾಬಾ ರಾಮದೇವ್​ ವಿರುದ್ಧ ದೇಶ ದ್ರೋಹ ಪ್ರಕರಣವನ್ನ ದಾಖಲಿಸಬೇಕು ಎಂದು ಮನವಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...