alex Certify BIG NEWS: ಮೋದಿ ಸರ್ಕಾರದಿಂದ ಗ್ರಾಮೀಣ ಜನರ ಬದುಕು ಬದಲಿಸುವ ಐತಿಹಾಸಿಕ ಯೋಜನೆ: ಆಧಾರ್ ಮಾದರಿ ಆಸ್ತಿ ಕಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿ ಸರ್ಕಾರದಿಂದ ಗ್ರಾಮೀಣ ಜನರ ಬದುಕು ಬದಲಿಸುವ ಐತಿಹಾಸಿಕ ಯೋಜನೆ: ಆಧಾರ್ ಮಾದರಿ ಆಸ್ತಿ ಕಾರ್ಡ್

ನವದೆಹಲಿ: ಗ್ರಾಮೀಣ ಭಾರತವನ್ನು ಪರಿವರ್ತಿಸಲು ಮತ್ತು ಲಕ್ಷಾಂತರ ಭಾರತೀಯರನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇವತ್ತು ಚಾಲನೆ ನೀಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಆಧಾರ್ ಕಾರ್ಡ್ ಮಾದರಿ ಆಸ್ತಿ ಕಾರ್ಡ್ ವಿತರಣೆಗೆ(ಸ್ವಾಮಿತ್ವ ಯೋಜನೆ) ಚಾಲನೆ ನೀಡಲಿದ್ದಾರೆ. ಈ ಕಾರ್ಡುಗಳಿಗೆ ಆಧಾರ್ ಕಾರ್ಡ್ ರೀತಿಯಲ್ಲೇ ಅನನ್ಯ ಗುರುತಿನ ಸಂಖ್ಯೆ ಇರುತ್ತದೆ. ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ತಂತ್ರಜ್ಞಾನ ವಿಧಾನಗಳ ಕಾರ್ಡ್ ವಿತರಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.

ಸಾಲ ಮತ್ತು ಇತರೆ ಹಣಕಾಸಿನ ನೆರವು ಪಡೆದುಕೊಳ್ಳಲು ಆಸ್ತಿ ಕಾರ್ಡ್ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಿದೆ. ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ಉತ್ತರಾಖಂಡ್ ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳ ಜನತೆಗೆ ಮೊದಲ ಹಂತದಲ್ಲಿ ಕಾರ್ಡ್ ಪಡೆಯಲು ಅವಕಾಶ ನೀಡಲಾಗಿದೆ. ಆಸ್ತಿ ಮಾಲೀಕರು ತಮ್ಮ ಮೊಬೈಲ್ ಗೆ ಬರುವ ಸಂದೇಶ ಲಿಂಕ್ ಮಾಡುವ ಮೂಲಕ ಆಸ್ತಿ ಕಾರ್ಡ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ನಂತರ ರಾಜ್ಯ ಸರ್ಕಾರಗಳ ವತಿಯಿಂದ ಕಾರ್ಡ್ ವಿತರಣೆ ಮಾಡಲಾಗುವುದು.

ಆಸ್ತಿ ಒಡೆತನಕ್ಕೆ ಸಂಬಂಧಿಸಿದ ಕಾರ್ಡ್ ಗಳನ್ನು ವಿತರಿಸುವ ಸ್ವಾಮಿತ್ವ ಯೋಜನೆ ಇದಾಗಿದ್ದು ಗ್ರಾಮೀಣ ಭಾರತ ಪರಿವರ್ತಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆಯಾಗಿದೆ. ಡ್ರೋನ್ ಮೂಲಕ ಅಳೆದು ಸಿದ್ಧಪಡಿಸಲಾದ ಮನೆ ದಾಖಲೆಗಳನ್ನು ಗ್ರಾಮಸ್ಥರಿಗೆ ವಿತರಿಸಲಾಗುವುದು. ಮನೆ ಮತ್ತು ಸುತ್ತಲಿನ ಜಾಗಕ್ಕೆ ದಾಖಲೆ ಇಲ್ಲದ ಕಾರಣ ಗ್ರಾಮಾಂತರ ಪ್ರದೇಶದಲ್ಲಿ ಲಕ್ಷಾಂತರ ಸಿವಿಲ್ ವ್ಯಾಜ್ಯಗಳು ಕೋರ್ಟ್ ಮೆಟ್ಟಿಲೇರಿದೆ. ತಮ್ಮ ಮನೆ, ಜಾಗವನ್ನು ಒತ್ತೆಯಿಟ್ಟು ಸಾಲ ಪಡೆಯಲು ಗ್ರಾಮೀಣ ಜನರಿಗೆ ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಸ್ವಾಮಿತ್ವ ಯೋಜನೆ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...