alex Certify ಹೊಲದಲ್ಲಿ ಅರೆ ಬೆತ್ತಲಾಗಿತ್ತು ಮೃತದೇಹ: ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಉತ್ತರ ಪ್ರದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ಅರೆ ಬೆತ್ತಲಾಗಿತ್ತು ಮೃತದೇಹ: ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಉತ್ತರ ಪ್ರದೇಶ

ಲಖ್ನೋ: ಉತ್ತರ ಪ್ರದೇಶದ ಹತ್ರಾಸ್ ಘಟನೆ ಬೆನ್ನಲ್ಲೇ ಬಾರಾಬಂಕಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.

ಬಾರಾಬಂಕಿಯ ಸತ್ರಿಕ್ ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ಹುಡುಗಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಖಾಸಗಿ ಭಾಗ ಸೇರಿದಂತೆ ದೇಹದ ಭಾಗಗಳನ್ನು ಹಲ್ಲು, ಉಗುರುಗಳಿಂದ ಗಾಯಗೊಳಿಸಿ ಹತ್ಯೆಮಾಡಿದ್ದಾರೆ.

ಜಮೀನಿಗೆ ತೆರಳಿದ್ದ ಬಾಲಕಿ ನಾಪತ್ತೆಯಾಗಿದ್ದು ಆಕೆಯ ಕುಟುಂಬದವರು ದೂರು ನೀಡಿದ್ದಾರೆ. ತೀವ್ರ ಹುಡುಕಾಟದ ನಂತರ ಜಮೀನಿನಲ್ಲಿ ಬಾಲಕಿಯ ಮೃತದೇಹ ಕಂಡು ಬಂದಿದೆ. ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು  ಕೈಕಾಲುಗಳನ್ನು ಕಟ್ಟಲಾಗಿತ್ತು.

ಶುಕ್ರವಾರ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಮಾಹಿತಿ ಗೊತ್ತಾಗಿದೆ. ಐವರು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಬಾಲಕಿಯ ಖಾಸಗಿ ಭಾಗಕ್ಕೆ ತೀವ್ರ ಹಾನಿ ಮಾಡಲಾಗಿದೆ. ದೇಹ ಮತ್ತು ಮುಖದ ಮೇಲೆ ಹಲ್ಲುಗಳ ಗುರುತುಗಳು ಇದ್ದವು. ಉಗುರಿನಿಂದ ಗಾಯಗೊಳಿಸಲಾಗಿದ್ದು ಇಂತಹ ಗಾಯಗಳು ದೇಹದ ಹಲವು ಭಾಗದಲ್ಲಿ ಕಂಡುಬಂದಿವೆ ಎಂದು ಹೇಳಲಾಗಿದೆ.

ಸಾಮೂಹಿಕ ಅತ್ಯಾಚಾರದ ಬಳಿಕ ಬಾಲಕಿಯನ್ನು ಥಳಿಸಲಾಗಿದೆ. ಆಕೆಯ ಕೈಕಾಲುಗಳನ್ನು ಕಟ್ಟಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...