alex Certify ಕೊರೊನಾ ಮಧ್ಯೆಯೇ ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮಧ್ಯೆಯೇ ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ

ಕೊರೊನಾದಿಂದಾಗಿ ಇಡೀ ದೇಶವೇ ಲಾಕ್‌ಡೌನ್ ಆಗಿದೆ. ಕೆಲವೊಂದು ಸಡಿಲಿಕೆಯನ್ನು ನೀಡಿದ್ದರೂ ಕೊರೊನಾ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಸರ್ಕಾರ, ಪೊಲೀಸರು, ವೈದ್ಯಕೀಯ ಸಿಬ್ಬಂದಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಈ ಸೋಂಕು ಹರಡದಂತೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ನಡೆದಿದೆ.

ಹೌದು, ಲಾಕ್‌ಡೌನ್ ಮಧ್ಯೆಯೇ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವೈಯಕ್ತಿಕ ಸುರಕ್ಷತೆಯ ಕಾರಣ ನೀಡಿ ಹರಿಯಾಣ ಮೂಲದ ಮಹಿಳಾ ಐಎಎಸ್ ಅಧಿಕಾರಿ ರಾಣಿ ನಗರ್ ತಮ್ಮ ಹುದ್ದೆಗೆ ರಿಸೈನ್ ಮಾಡಿದ್ದಾರೆ. ಹರಿಯಾಣದಲ್ಲಿ ನಿರ್ದೇಶಕಿ, ಹೆಚ್ಚುವರಿ ನಿರ್ದೇಶಕಿ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ವಿಭಾಗದಲ್ಲಿ ಹುದ್ದೆಯನ್ನು ನಿರ್ವಹಿಸಿದ್ದಾರೆ.

ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಾಣಿ ನಗರ್, ರಾಜೀನಾಮೆ ಪತ್ರವನ್ನೂ ಪೋಸ್ಟ್ ಮಾಡಿದ್ದಾರೆ. ವೈಯಕ್ತಿಕ ಸುರಕ್ಷತೆ ನನಗೆ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಕಚೇರಿ, ಹರಿಯಾಣ ರಾಜ್ಯಪಾಲ ಹಾಗೂ ಹರಿಯಾಣ ಮುಖ್ಯಮಂತ್ರಿಗೂ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...