alex Certify ಮಾನವೀಯತೆ ಇನ್ನೂ ಇದೆ ಎಂಬುದಕ್ಕೆ ಇಲ್ಲಿದೆ ಉದಾಹರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಇನ್ನೂ ಇದೆ ಎಂಬುದಕ್ಕೆ ಇಲ್ಲಿದೆ ಉದಾಹರಣೆ

ಮುಂಬೈ: ಕೊರೊನಾ ವೈರಸ್ ಅಬ್ಬರದ ನಡುವೆ ಮುಂಬೈನಲ್ಲಿ ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ ಮಾಡಿದೆ.

ಮಳೆಯ ಸಂದರ್ಭವನ್ನು ಅಲ್ಲಿನ ಜನ ಖುಷಿಪಡುವ ಹಲವು ವಿಡಿಯೋಗಳು ಜಾಲತಾಣಗಳಲ್ಲಿ ಓಡಾಡುತ್ತಿವೆ. ಬಸ್ ಮೇಲಿಂದ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಜಂಪ್ ಮಾಡುವ ಮುಂಬೈ ಜನರ ವಿಡಿಯೋ ಫುಲ್ ವೈರಲ್ ಆಗಿತ್ತು. ಈಗ ಬೆಕ್ಕಿನ ಮರಿಯೊಂದನ್ನು ವ್ಯಕ್ತಿಯೊಬ್ಬ ರಕ್ಷಿಸುವ ವಿಡಿಯೋ ಮುನ್ನೆಲೆಗೆ ಬಂದಿದೆ.‌

ನೀರು ತುಂಬಿ ಅಪಾಯಕ್ಕೆ ಸಿಲುಕಿದ್ದ ಬೆಕ್ಕಿನ ಮರಿಯನ್ನು ಬೈಕ್ ಚಾಲಕನೊಬ್ಬ ರಕ್ಷಿಸಿ, ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಹೋಗುವ ವಿಡಿಯೋವನ್ನು ಎಎನ್ಐ ಟ್ವೀಟ್ ಮಾಡಿದೆ.‌ ಮಾನವೀಯತೆ ಇನ್ನೂ ಇದೆ ಎಂಬುದನ್ನು ಇಂಥ ಘಟನೆಗಳು ಸಾಬೀತು ಮಾಡುತ್ತವೆ ಎಂದು ಹಲವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...