alex Certify ಬಂಡೆಗಳ ನಡುವೆ ಸಿಲುಕಿದ್ದವನ ರಕ್ಷಿಸಿದ ಇಂಡೋ – ಟಿಬೆಟಿಯನ್​ ಬಾರ್ಡರ್​ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಡೆಗಳ ನಡುವೆ ಸಿಲುಕಿದ್ದವನ ರಕ್ಷಿಸಿದ ಇಂಡೋ – ಟಿಬೆಟಿಯನ್​ ಬಾರ್ಡರ್​ ಪೊಲೀಸರು

ಸಿಕ್ಕಿಂನ ಬಂಡೆಗಳ ನಡುವೆ ಸಿಲುಕಿ ಹಾಕಿಕೊಂಡಿದ್ದ ವ್ಯಕ್ತಿಯನ್ನ ಇಂಡೋ ಟಿಬೇಟಿಯನ್​ ಬಾರ್ಡರ್​ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಗಂಟೆಗಟ್ಟಲೇ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಬಳಿಕ ವ್ಯಕ್ತಿಯನ್ನ ಸುರಕ್ಷಿತವಾಗಿ ಕರೆತರಲಾಯಿತು. ರಕ್ಷಣಾ ಕಾರ್ಯಾಚರಣೆಯ ಫೋಟೋಗಳನ್ನ ಐಟಿಬಿಪಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ.

ಸಿಕ್ಕಿಂನ ಲಾಚುಂಗ್​ ಬಳಿ 48ನೇ ಬೆಟಾಲಿಯನ್​ ಐಟಿಬಿಪಿ ಈ ರಕ್ಷಣಾ ಕಾರ್ಯ ಕೈಗೊಂಡಿತ್ತು. ಬಂಡೆಗಳ ನಡುವಿನಿಂದ ಸೇಫಾಗಿ ಬಂದ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ಐಟಿಬಿಪಿ ಟ್ವಿಟರ್​ನಲ್ಲಿ ಬರೆದುಕೊಂಡಿದೆ.

ನಮ್ಮ ರಕ್ಷಣಾ ತಂಡ ಉಜ್ವಲ್​ ರೈ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನ ಸ್ಥಳೀಯರ ಸಹಾಯದಿಂದ ರಕ್ಷಿಸಿದೆ. ಹಾಗೂ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ಐಟಿಪಿಬಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ರು.

— ITBP (@ITBP_official) January 10, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...