alex Certify ಪತ್ರಕರ್ತನ ಮಗನ ಅಪಹರಣ: 45 ಲಕ್ಷ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಕರ್ತನ ಮಗನ ಅಪಹರಣ: 45 ಲಕ್ಷ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಹೈದರಾಬಾದ್: ತೆಲಂಗಾಣದಲ್ಲಿ ಪತ್ರಕರ್ತರೊಬ್ಬರ 9 ವರ್ಷದ ಪುತ್ರನನ್ನು ಅಪಹರಿಸಲಾಗಿದ್ದು, 45 ಲಕ್ಷ ರೂಪಾಯಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನನ್ನು ಅಪಹರಿಸಲಾಗಿದೆ.

ಮೆಹಬೂಬಬಾದ್ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದಿದ್ದ ಅಪಹರಣಕಾರರು ಬಾಲಕನನ್ನು ಅಪಹರಿಸಿದ್ದಾರೆ. ನಂತರದಲ್ಲಿ ಬಾಲಕನ ತಾಯಿಯನ್ನು ಇಂಟರ್ನೆಟ್ ದೂರವಾಣಿ ಮೂಲಕ ಸಂಪರ್ಕಿಸಿ ಬಾಲಕನ ಬಿಡುಗಡೆಗಾಗಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಾಲಕ ಮತ್ತು ಅಪಹರಣಕಾರರನ್ನು ಪತ್ತೆ ಹಚ್ಚಲು 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...