alex Certify ಕೇಂದ್ರೀಯ ವಿದ್ಯಾಲಯದ 9 ಮತ್ತು 11 ನೇ ತರಗತಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ‘ಫಲಿತಾಂಶ’ ಕುರಿತು ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರೀಯ ವಿದ್ಯಾಲಯದ 9 ಮತ್ತು 11 ನೇ ತರಗತಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ‘ಫಲಿತಾಂಶ’ ಕುರಿತು ಮಹತ್ವದ ಆದೇಶ

ದೇಶದಲ್ಲಿ ಕೊರೊನಾ ಸೋಂಕು ಆರ್ಭಟಿಸುತ್ತಿದೆ. ಇದು ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದ್ದು, ಸಾರ್ವಜನಿಕರು ಆರ್ಥಿಕವಾಗಿ ತತ್ತರಿಸಿಹೋಗಿದ್ದಾರೆ. ಜೊತೆಗೆ ಶೈಕ್ಷಣಿಕ ವಲಯವೂ ಸಮಸ್ಯೆಯನ್ನು ಎದುರಿಸುತ್ತಿದ್ದು, ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್‌ ಆಗಿವೆ.

ಹೀಗಾಗಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಆ ಶೈಕ್ಷಣಿಕ ವರ್ಷದ ಇತರೆ ಪರೀಕ್ಷೆಗಳಲ್ಲಿ ಗಳಿಸಿದ ಅಂಕ ಗಳ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಪ್ರಮೋಷನ್‌ ನೀಡಲಾಗಿತ್ತು. ಇದರ ಮಧ್ಯೆ ಕೇಂದ್ರೀಯ ವಿದ್ಯಾಲಯ 9 ಮತ್ತು 11 ನೇ ತರಗತಿಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳ ಕುರಿತಂತೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ.

ಈ ಮೊದಲು 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳು ಎರಡು ಅಥವಾ ಅದಕ್ಕಿಂತ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೆ ಅಂತವರು ಮುಂದಿನ ತರಗತಿಗೆ ಹೋಗಲು ಸಪ್ಲಿಮೆಂಟರಿ ಪರೀಕ್ಷೆ ಬರೆದು ಪಾಸ್‌ ಆಗಬೇಕೆಂದು ತಿಳಿಸಲಾಗಿತ್ತು. ಇದೀಗ ಈ ಆದೇಶದಲ್ಲಿ ಮಾರ್ಪಾಟು ಮಾಡಲಾಗಿದ್ದು, 9 ಮತ್ತು 11 ನೇ ತರಗತಿಯ ಎಲ್ಲ 5 ವಿಷಯಗಳಲ್ಲೂ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರೂ ಸಹ ಅವರಿಗೆ ಶಾಲೆಯಿಂದ ಪ್ರಾಜೆಕ್ಟ್‌ ವರ್ಕ್‌ ನೀಡುವ ಮೂಲಕ ಅಂಕಗಳನ್ನು ನೀಡಿ ಮುಂದಿನ ತರಗತಿಗೆ ಪ್ರಮೋಟ್‌ ನೀಡಲು ಸೂಚಿಸಲಾಗಿದೆ. ಈ ಕುರಿತು ಕೇಂದ್ರೀಯ ವಿದ್ಯಾಲಯದ ಜಂಟಿ ನಿರ್ದೇಶಕರಾದ ಪಿಯಾ ಠಾಕೂರ್‌ ಆದೇಶ ಹೊರಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...