alex Certify ವೈದ್ಯಕೀಯ ಕಾಲೇಜಿನಲ್ಲಿ ‘ರಕ್ಷಾ ಬಂಧನ’ ರದ್ದುಪಡಿಸಿದ ಕೇರಳ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಕಾಲೇಜಿನಲ್ಲಿ ‘ರಕ್ಷಾ ಬಂಧನ’ ರದ್ದುಪಡಿಸಿದ ಕೇರಳ ಸರ್ಕಾರ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸದಂತೆ ಕೇರಳ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಮಂಡಳಿ ನಿರ್ದೇಶಕಿ ಡಾ. ರಾಮ್ಲಾ ಬೀವಿ ಸುತ್ತೋಲೆ ಕಳುಹಿಸಿದ್ದಾರೆ.

ಕಳೆದ ವರ್ಷ ರಕ್ಷಾ ಬಂಧನ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸರ್ಕಾರಿ ಕಾಲೇಜುಗಳಲ್ಲಿ ಅನುಮತಿ ಪಡೆಯದೆ ರಕ್ಷಾ ಬಂಧನ ಆಚರಿಸಿದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದೇ ಒಂದು ಧರ್ಮಕ್ಕೆ ಸೀಮಿತವಾದ ಆಚರಣೆಯನ್ನು ಕಾಲೇಜುಗಳಲ್ಲಿ ಆಚರಿಸಲಾಗುವುದಿಲ್ಲ. ಹೀಗಾಗಿ ಕಳೆದ ವರ್ಷ ನಡೆದ ಘಟನೆ ಮರುಕಳಿಸದಂತೆ ತಡೆಯಲು ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...