ಲಕ್ನೋ: ಉತ್ತರಪ್ರದೇಶದ ಬರ್ಹಾಜ್ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ತಿವಾರಿ, ಮುಸ್ಲಿಂ ವ್ಯಾಪಾರಿಗಳಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ತಮ್ಮ ವಿವಾದಿತ ಹೇಳಿಕೆಗೆ ಆಪಾರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದು, ಕೆಲವು ಮುಸ್ಲಿಂ ವ್ಯಾಪಾರಿಗಳು ತರಕಾರಿಗೆ ಎಂಜಲು ಹಚ್ಚಿ ಕೊರೋನಾ ಸೋಂಕು ಹರಡುತ್ತಿದ್ದಾರೆ ಎಂದು ಬೆಂಬಲಿಗರು ತಿಳಿಸಿದ್ದರು. ಅಂತಹ ವ್ಯಾಪಾರಿಗಳಿಂದ ತರಕಾರಿ ಖರೀದಿಸಬೇಡಿ ಎಂದು ಹೇಳಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ.
ಕೋಮುದ್ವೇಷ ಹರಡುತ್ತಿರುವ ಬಿಜೆಪಿ ಶಾಸಕ ಸುರೇಶ್ ತಿವಾರಿಯನ್ನು ಬಂಧಿಸಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸಿವೆ. ಸುರೇಶ್ ತಿವಾರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ, ಸಾಂಕ್ರಾಮಿಕ ರೋಗಕ್ಕೆ ಕೋಮುವಾದ ಬೆರೆಸಬೇಡಿ ಎಂದು ಎಚ್ಚರಿಕೆ ನೀಡಿದರೂ ಬಿಜೆಪಿ ಶಾಸಕ ಸುರೇಶ್ ತಿವಾರಿ, ಮುಸ್ಲಿಂ ವ್ಯಾಪಾರಿಗಳಿಂದ ತರಕಾರಿ ಖರೀದಿಸಬೇಡಿ ಎಂದು ಹೇಳಿರುವುದು ಭಾರೀ ವಿವಾದವನ್ನೇ ಸೃಷ್ಠಿಸಿದೆ.