ನವದೆಹಲಿ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ಇಂದಿನಿಂದ ಮೇ 17 ರ ವರೆಗೆ ಜಾರಿಯಲ್ಲಿರುತ್ತದೆ.
ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು, ರೆಡ್ ಜೋನ್ ನಗಳಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಕೇಂದ್ರದ ನಿಯಮಗಳ ಅನುಸಾರ ರಾಜ್ಯದಲ್ಲಿ ಆರೆಂಜ್ ಮತ್ತು ಗ್ರೀನ್ ವಲಯದಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.
ಇಂದಿನಿಂದ ಮದ್ಯಮಾರಾಟ, ಬಸ್ ಸಂಚಾರ ಆರಂಭವಾಗಲಿದೆ. ಸರ್ಕಾರಿ ಕಚೇರಿಗಳು ಓಪನ್ ಆಗಲಿವೆ. ಗ್ರೀನ್ ಮತ್ತು ಆರೆಂಜ್ ವಲಯಗಳಲ್ಲಿ ಸಲೂನ್ ಶಾಪ್ ತೆರೆಯಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಹಲವು ವಿನಾಯಿತಿಗಳನ್ನು ನೀಡಲಾಗಿದ್ದು, ಬಹುತೇಕ ಕಡೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಲಿದೆ.
ಲಾಕ್ ಡೌನ್ ಸಡಿಲಿಕೆ ಮಾಡಿದ್ದರೂ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಹಲವು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.