ನವದೆಹಲಿ: ಮೇ 3 ರವರೆಗೂ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವು ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ನೀಡಿರುವ ಕೇಂದ್ರ ಸರ್ಕಾರ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಿದೆ.
ಅದೇ ರೀತಿ ಕೃಷಿ ಮತ್ತು ಅರಣ್ಯ ಉತ್ಪನ್ನಗಳು, ವಿದ್ಯಾರ್ಥಿಗಳಿಗೆ ನೆರವಾಗುವ ಪುಸ್ತಕದ ಅಂಗಡಿ ಓಪನ್ ಮಾಡಲು ಅವಕಾಶ ನೀಡಿದೆ. ಬೇಸಿಗೆ ಆಗಿರುವ ಕಾರಣ ಫ್ಯಾನ್ ಮಾರಾಟ ಮಳಿಗೆಗಳ ಆರಂಭಕ್ಕೆ ವಿನಾಯಿತಿ ನೀಡಲಾಗಿದೆ.
ನೌಕಾದಳದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ವಿನಾಯಿತಿ ನೀಡಿದೆ. ಇದರೊಂದಿಗೆ ಮೊಬೈಲ್ ರೀಚಾರ್ಜ್ ಅಂಗಡಿ, ಹಿಟ್ಟಿನ ಗಿರಣಿ, ಬ್ರೆಡ್ ತಯಾರಿಕೆ, ಹಾಲು ಸಂಸ್ಕರಣೆಗೆ ವಿನಾಯಿತಿ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮಾವಳಿ ಪಾಲನೆ ಮಾಡಬೇಕು ಎಂದು ತಿಳಿಸಲಾಗಿದೆ.