ನವದೆಹಲಿ: ಲಾಕ್ ಡೌನ್ ನಡುವೆಯೂ ದೇಶೀಯ ವಿಮಾನಯಾನಕ್ಕೆ ಅವಕಾಶ ನೀಡಿದ್ದು ರಾಜ್ಯದಲ್ಲೂ ಲೋಹದ ಹಕ್ಕಿಗಳು ಟೇಕಾಫ್ ಆಗಲಿವೆ.
200 ಕ್ಕೂ ಹೆಚ್ಚು ವಿಮಾನಗಳ ಹಾರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೊದಲ ವಿಮಾನ ಜಾರ್ಖಂಡ್ ಗೆ ಪ್ರಯಾಣ ಬೆಳೆಸಲಿದೆ ಎನ್ನಲಾಗಿದೆ. ಕೊರೋನಾ ಆರ್ಭಟದ ನಡುವೆಯೂ ಇಂದಿನಿಂದಲೇ ದೇಶಿಯ ವಿಮಾನಗಳ ಹಾರಾಟ ಆರಂಭವಾಗಿದೆ.
ಲಾಕ್ಡೌನ್ ನಂತರ ಮೊದಲ ಬಾರಿಗೆ ಇಂದಿನಿಂದ ವಿದೇಶಿಯ ವಿಮಾನಗಳ ಹಾರಾಟ ಆರಂಭವಾಗಿದೆ. ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದರೂ ಸೋಮವಾರದಿಂದ ದೇಶೀಯ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈಗಾಗಲೇ ಸಕಲ ಸಿದ್ಧತೆಗಳೊಂದಿಗೆ ವಿಮಾನಯಾನ ಆರಂಭವಾಗಿದೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡು ಸರ್ಕಾರಗಳು ವಿಮಾನ ಸಂಚಾರ ಪುನಾರಂಭಕ್ಕೆ ಸಮ್ಮತಿಸಿಲ್ಲ. ಉಳಿದ ರಾಜ್ಯಗಳಲ್ಲಿ ಪ್ರಯಾಣಿಕರ ವಿಮಾನಯಾನ ಸೇವೆ ಆರಂಭವಾಗಿದೆ.