alex Certify ಬಾಬ್ರಿ ಮಸೀದಿ ಪ್ರಕರಣ: ಸಿಬಿಐ ಪ್ರಶ್ನೆಗೆ ಇಂದು ಅಡ್ವಾಣಿ ಉತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಬ್ರಿ ಮಸೀದಿ ಪ್ರಕರಣ: ಸಿಬಿಐ ಪ್ರಶ್ನೆಗೆ ಇಂದು ಅಡ್ವಾಣಿ ಉತ್ತರ

ಬಾಬ್ರಿ ಮಸೀದಿ ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಮಾಜಿ ಗೃಹ ಸಚಿವ ಲಾಲ್ ಕೃಷ್ಣ ಅಡ್ವಾಣಿಯವರ ಹೇಳಿಕೆಯನ್ನು ಶುಕ್ರವಾರ ದಾಖಲಿಸಲಿದೆ. ಅಡ್ವಾಣಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಹೇಳಿಕೆಯನ್ನು ಸಿಆರ್‌ಪಿಸಿ 313 ರ ಅಡಿಯಲ್ಲಿ ದಾಖಲಿಸಲಾಗುವುದು.

ಒಟ್ಟು 32 ರಲ್ಲಿ 29 ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಡ್ವಾಣಿಗಾಗಿ ಸಿಬಿಐ 1000 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸಿದ್ಧಪಡಿಸಿದೆ. ಇದಕ್ಕೂ ಮುನ್ನ ಗುರುವಾರ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿಕೆ ದಾಖಲಿಸಿದ್ದರು. ತಾನು ನಿರಪರಾಧಿ ಎಂದು ಹೇಳಿಕೊಂಡ ಜೋಶಿ, ಘಟನೆಯ ಸಮಯದಲ್ಲಿ ಹಾಜರಿರಲಿಲ್ಲ ಎಂದರು.

ಸಿಬಿಐ ಜೋಶಿಗೆ 1050 ಪ್ರಶ್ನೆಗಳನ್ನು ಕೇಳಿತ್ತು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3:30 ರವರೆಗೆ ವಿಡಿಯೋ ಕಾನ್ಫರೆನ್ಸ್ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...