alex Certify ʼರಾಮ ಮಂದಿರʼ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದವನು ಅಂದರ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼರಾಮ ಮಂದಿರʼ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದವನು ಅಂದರ್..!

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗ್ತಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯಪ್ರದೇಶದ ಭೋಪಾಲ್​ನ ವ್ಯಕ್ತಿಯೊಬ್ಬ ರಾಮ ಮಂದಿರದ ಹೆಸರಲ್ಲಿ ನಕಲಿ ಚೀಟಿಗಳನ್ನ ನೀಡಿ ದೇಣಿಗೆ ಸಂಗ್ರಹಿಸಿದ ತಪ್ಪಿಗೆ ಜೈಲು ಪಾಲಾಗಿದ್ದಾನೆ.

ಮನೀಶ್​ ರಜ್​ಪೂತ್​​ ಎಂಬಾತ ಅಂಗಡಿ ಮಾಲೀಕರಿಗೆ ನಕಲಿ ರಶೀದಿಗಳನ್ನ ನೀಡಿ ಹಣ ಸಂಗ್ರಹಿಸುತ್ತಿದ್ದ ಎಂದು ಪೊಲೀಸ್​ ಅಧಿಕಾರಿ ರಾಜೇಶ್​ ಭದೋರಿಯಾ ಹೇಳಿದ್ದಾರೆ.

ನಕಲಿ ಖಾತೆ ಮೂಲಕ ಸುಳ್ಳು ವದಂತಿ ಹಬ್ಬಿಸಿದವರು ಅರೆಸ್ಟ್

ರಾಜಪೂತ್​ನ ಕಳ್ಳಾಟದ ಬಗ್ಗೆ ಮಾಹಿತಿ ಪಡೆದ ವಿಶ್ವ ಹಿಂದೂ ಪರಿಷತ್​ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿದ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವ ಹಿಂದೂ ಪರಿಷತ್​ ಮುಖಂಡ ಯತೇಂದ್ರ ಪಾಲ್​ ಸಿಂಗ್​ ಈ ಪ್ರಕರಣದ ದೂರುದಾರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...