alex Certify ಘೋರ ಕೃತ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು: ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಂದ ಯುವಕ – ಮನೆಯಲ್ಲಿ ರಕ್ತದ ಹೊಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಘೋರ ಕೃತ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು: ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಂದ ಯುವಕ – ಮನೆಯಲ್ಲಿ ರಕ್ತದ ಹೊಳೆ

ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಉಪ್ಪಳ ಬಾಯಾರು ಸಮೀಪದ ಕವಿಯಾಲ ಗುರುಕಮೇರಿ ಎಂಬಲ್ಲಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥ ಯುವಕ ನಾಲ್ವರು ಸಂಬಂಧಿಕರನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಸದಾಶಿವ, ಬಾಬು, ವಿಠಲ ಮತ್ತು ದೇವಕಿ ಕೊಲೆಯಾದವರು ಎಂದು ಕೇಳಲಾಗಿದೆ. ಆರೋಪಿ ಉದಯ್ ಮಾನಸಿಕ ಅಸ್ವಸ್ಥನಾಗಿದ್ದು ಮೂವರು ಮಾವಂದಿರು ಮತ್ತು ಚಿಕ್ಕಮ್ಮನನ್ನು ಕೊಲೆ ಮಾಡಿದ್ದಾನೆ. ಸ್ಥಳೀಯರು ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ. ಘಟನೆಯ ವೇಳೆಯಲ್ಲಿ ಆರೋಪಿಯ ತಾಯಿ ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ.

ಉದಯ್ ಮನೆಯಲ್ಲಿದ್ದ ಕೊಡಲಿಯನ್ನು ತೆಗೆದುಕೊಂಡು ಮಾವಂದಿರು ಹಾಗೂ ಚಿಕ್ಕಮ್ಮನನ್ನು ಕಡಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ಪರಾರಿಯಾಗುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಕಟ್ಟಿಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...