alex Certify ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ ಮಟಮಟ ಮಧ್ಯಾಹ್ನ ಮನೆಯಲ್ಲೇ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಶ್ರೀಲಕ್ಷ್ಮಿ ಕೊಲೆಯಾದ ಮಹಿಳೆ. ಇಬ್ಬರು ಪುತ್ರರು ಮತ್ತು ಪತಿಯೊಂದಿಗೆ ವಿದ್ಯಾನಗರದಲ್ಲಿ ವಾಸವಾಗಿದ್ದ ಶ್ರೀಲಕ್ಷ್ಮಿ ಅವರನ್ನು ಜುಲೈ 29 ರಂದು ಮಧ್ಯಾಹ್ನ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಹಿರಿಯ ಪುತ್ರ ಮನುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಕಳೆದ ಜುಲೈ 29 ರಂದು ಶ್ರೀಲಕ್ಷ್ಮಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಮೈಮೇಲಿದ್ದ ಒಡವೆಗಳು ಹಾಗೆ ಇದ್ದವು. ಪರಿಚಿತರೇ ಕೊಲೆ ಮಾಡಿರುವ ಶಂಕೆಯಿಂದ ಪೊಲೀಸರು ಮನುನನ್ನು ವಶಕ್ಕೆ ಪಡೆದುಕೊಂಡಿದ್ದರು. ತಾಯಿಯನ್ನು ಕೊಲೆ ಮಾಡಿದ ಮನು ರಕ್ತಸಿಕ್ತ ಬಟ್ಟೆ ಮತ್ತು ಚಾಕುಗಳನ್ನು ರೈಲ್ವೆ ಟ್ರ್ಯಾಕ್ ಬಳಿ ಎಸೆದಿದ್ದ. ಮನು ಹುಡುಗಿ ಜೊತೆಗೆ ಹೆಚ್ಚಾಗಿ ಮಾತನಾಡುತ್ತಿದ್ದ. ಮೊಬೈಲ್ ಹೆಚ್ಚಾಗಿ ಬಳಸುತ್ತಿದ್ದ ಬಗ್ಗೆ ತಾಯಿ ಬುದ್ಧಿಮಾತು ಹೇಳಿದ್ದರು. ವರಸೆಯಲ್ಲಿ ತಂಗಿ ಆಗಬೇಕಾದ ಹುಡುಗಿ ಬೇಡ ಎಂದಿದ್ದಕ್ಕೆ ತಾಯಿಯ ಕುತ್ತಿಗೆ ಮತ್ತು ಎದೆಗೆ ಚುಚ್ಚಿ ಕೊಲೆ ಮಾಡಿ ಹೊರಗೆ ಹೋಗಿದ್ದಾನೆ ಎನ್ನಲಾಗಿದೆ.

ಸಂಜೆ ಮನೆಗೆ ಬಂದ ಕಿರಿಯ ಪುತ್ರ ತಾಯಿ ಕೊಲೆಯಾಗಿರುವುದು ಕಂಡು ಮಾಹಿತಿ ನೀಡಿದ್ದಾನೆ. ಈ ವೇಳೆ ಮನು ಕೂಡ ಅಲ್ಲಿಗೆ ಬಂದಿದ್ದು ತನಗೇನು ಗೊತ್ತಿಲ್ಲದಂತೆ ವರ್ತಿಸಿದ್ದಾನೆ. ಆದರೆ ಪೊಲೀಸ್ ತನಿಖೆಯಲ್ಲಿ ಕೊಲೆ ರಹಸ್ಯ ಗೊತ್ತಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...