ನವದೆಹಲಿ: ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮತ್ತು ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.
ಪ್ಯಾಕೇಜ್ ಕುರಿತಾದ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮುಂದಿನ ಮೂರು ತಿಂಗಳು 80 ಕೋಟಿ ಜನರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಮೂರು ತಿಂಗಳ ಕಾಲ 8 ಕೋಟಿ ಬಡ ಕುಟುಂಬಗಳಿಗೆ ಅಡುಗೆ ಅನಿಲವನ್ನು ಉಚಿತವಾಗಿ ನೀಡಲಾಗುವುದು. ಇದೇ ರೀತಿ ಎಲ್ಲಾ ಕುಟುಂಬದವರಿಗೆ ಮೂರು ತಿಂಗಳ ಕಾಲ ನಿಗದಿತ ದವಸ ಧಾನ್ಯವನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಜನ್ ಧನ್ ಖಾತೆ ಹೊಂದಿದ ಮಹಿಳೆಯರಿಗೆ 500 ರೂಪಾಯಿಯಂತೆ ಮುಂದಿನ ಮೂರು ತಿಂಗಳ ಕಾಲ ಅವರ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.