ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 17 ರವರೆಗೂ ಮುಂದುವರೆಯಲಿದ್ದು, ಈ ಅವಧಿಯಲ್ಲಿ ಕೆಲವು ವಿನಾಯಿತಿ ನೀಡಲಾಗಿದೆ.
ಕಳೆದ 45 ದಿನಗಳಿಂದ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಪುನಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 25 ರಿಂದ ದೇಶಾದ್ಯಂತ ಸಾರ್ವಜನಿಕ ಸಾರಿಗೆ ಸ್ಥಗಿತವಾಗಿ ಸಾರ್ವಜನಿಕರು ಅಲ್ಲಲ್ಲೇ ಉಳಿದ ಪರದಾಟ ನಡೆಸಿದ್ದಾರೆ.
ಹೀಗಾಗಿ ಹಸಿರು, ಕೆಂಪು, ಕಿತ್ತಳೆ ವಲಯದಲ್ಲಿ ಹಂತ ಹಂತವಾಗಿ ಬಸ್, ಟ್ಯಾಕ್ಸಿ, ಕ್ಯಾಬ್ ಗಳ ಸಂಚಾರಕ್ಕೆ ಮತ್ತು ವಿಮಾನಗಳ ಹಾರಾಟಕ್ಕೆ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಮತ್ತು ಕಾರ್ ಚಾಲಕರ ಒಕ್ಕೂಟದ ಪ್ರತಿನಿಧೀಗಳೊಂದಿಗೆ ಮಾತುಕತೆ ನಡೆಸಿದ್ದು ಸಾರ್ವಜನಿಕ ಸಾರಿಗೆಯನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಾರ್ಗದರ್ಶಿ ಸೂತ್ರ ಪ್ರಕಟಿಸಿ ಸಾರ್ವಜನಿಕ ಸಾರಿಗೆ ಆರಂಭಿಸಲಾಗುವುದು. ಬಸ್, ಟ್ಯಾಕ್ಸಿ, ಕ್ಯಾಬ್ ಸೇವೆ ನೀಡುವಾಗ ಸಾಮಾಜಿಕ ಅಂತರ, ಹ್ಯಾಂಡ್ ವಾಶ್, ಮಾಸ್ಕ್ ಬಳಕೆ ಕಡ್ಡಾಯವಾಗಿರುತ್ತದ ಎಂದು ಹೇಳಿದ್ದಾರೆ.