alex Certify ಅಧಿಕಾರಕ್ಕೆ ಬಂದ್ರೆ ಸಿಎಂ ಜೈಲಿಗೆ: ನಿತೀಶ್ ವಿರುದ್ಧ ಚಿರಾಗ್ ಪಾಸ್ವಾನ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಕ್ಕೆ ಬಂದ್ರೆ ಸಿಎಂ ಜೈಲಿಗೆ: ನಿತೀಶ್ ವಿರುದ್ಧ ಚಿರಾಗ್ ಪಾಸ್ವಾನ್ ವಾಗ್ದಾಳಿ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಮತದಾನ ದಿನ ಸಮೀಪಿಸುತ್ತಿರುವಂತೆಯೇ ರಾಜಕೀಯ ನಾಯಕರ ನಡುವೆ ವಾಕ್ಸಮರ ಮುಂದುವರೆದಿದೆ. ಭರ್ಜರಿ ಪ್ರಚಾರ ಕೈಗೊಂಡಿರುವ ನಾಯಕರಿಂದ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಸಿಎಂ ನಿತೀಶ್ ಕುಮಾರ್ ವಿರುದ್ಧ ಚುನಾವಣೆ ಪ್ರಚಾರದ ವೇಳೆ ವಾಗ್ದಾಳಿ ನಡೆಸುತ್ತಿರುವ ಎಲ್.ಜೆ.ಪಿ. ನಾಯಕ ಚಿರಾಗ್ ಪಾಸ್ವಾನ್ ಮತ್ತೆ ಕಿಡಿಕಾರಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಜೈಲಿಗೆ ಹೋಗುವುದು ಪಕ್ಕಾ ಎಂದು ಹೇಳಿದ್ದಾರೆ.

ದುಮ್ರಾವ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಚಿರಾಗ್ ಪಾಸ್ವಾನ್, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಕಂಬಿ ಎಣಿಸಲಿದ್ದಾರೆ. ಅವರನ್ನು ಬೆಂಬಲಿಸುವ ಅಧಿಕಾರಿ ವರ್ಗ ಕೂಡ ಕಂಬಿ ಎಣಿಸಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...