alex Certify ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತೇ ಇಲ್ಲ ಪ್ರತಿಭಟನಾನಿರತ ಫ್ಯಾನ್ಸ್​ಗೆ ರಜನಿ ಸ್ಪಷ್ಟ ಸಂದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತೇ ಇಲ್ಲ ಪ್ರತಿಭಟನಾನಿರತ ಫ್ಯಾನ್ಸ್​ಗೆ ರಜನಿ ಸ್ಪಷ್ಟ ಸಂದೇಶ

ಸೂಪರ್​ ಸ್ಟಾರ್​ ರಜಿನಿಕಾಂತ್​ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಒತ್ತಾಯಿಸಿ ಅಭಿಮಾನಿಗಳು ನಡೆಸುತ್ತಿರುವ ಪ್ರತಿಭಟನಾ ವಿಚಾರವಾಗಿ ಪ್ರತಿಕ್ರಿಯಿಸಿರುವ ತಲೈವಾ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವ ಪ್ರಶ್ನೆಯಿಲ್ಲ. ದಯವಿಟ್ಟು ಈ ಪ್ರತಿಭಟನೆ ಕೈ ಬಿಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಆರೋಗ್ಯದ ಮುಂದೆ ಯಾವುದೂ ಇಲ್ಲ. ನಾನು ಈಗಾಗಲೇ ರಾಜಕೀಯಕ್ಕೆ ಎಂಟ್ರಿ ಕೊಡದರ ಬಗ್ಗೆ ಸ್ಪಷ್ಟ ಕಾರಣಗಳನ್ನ ನೀಡಿದ್ದೇನೆ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲವಾಗಿದೆ. ಹೀಗಾಗಿ ನನಗೆ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನ ನಡೆಸಿ ನನ್ನ ಮನಸ್ಸಿಗೆ ನೋವುಂಟು ಮಾಡಬೇಡಿ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಡಿಸೆಂಬರ್​ 31ರಂದು ತಮಿಳು ನಟ ರಜನಿಕಾಂತ್​ ತಮ್ಮ ರಜಿನಿ ಮಕ್ಕಳ್​ ಮಂಡ್ರಂ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಘೋಷಣೆ ಮಾಡಿದ್ದರು. ಆದರೆ ಇದಾದ ಬಳಿಕ ಅವರ ಆರೋಗ್ಯ ಹದಗೆಟ್ಟಿದ್ದರಿಂದ ತಮ್ಮ ರಾಜಕೀಯ ಪ್ರವೇಶ ನಿರ್ಧಾರವನ್ನ ಹಿಂಪಡೆದಿದ್ದರು.

— Rajinikanth (@rajinikanth) January 11, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...