alex Certify ʼನೈಟ್​ ಕರ್ಫ್ಯೂʼ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲವಂತೆ ಈ ರಾಜ್ಯ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನೈಟ್​ ಕರ್ಫ್ಯೂʼ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲವಂತೆ ಈ ರಾಜ್ಯ….!

ಕೊರೊನಾ ವೈರಸ್​ ತಡೆಗಾಗಿ ನೈಟ್​ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಇನ್ನೂ ಯಾವುದೇ ಯೋಜನೆಯನ್ನ ರೂಪಿಸಿಲ್ಲ ಎಂದು ತೆಲಂಗಾಣ ಗೃಹ ಸಚಿವ ಮೊಹಮ್ಮದ್​​ ಮಹ್ಮೂದ್​ ಅಲಿ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ನೆರೆಯ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ಮಿತಿ ಮೀರಿದೆ. ಇದೆಲ್ಲದರ ನಡುವೆಯೂ ಹೈದರಾಬಾದ್​ನಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯಾವುದೇ ರೀತಿಯ ಯೋಚನೆಯನ್ನ ಮಾಡಿಲ್ಲ ಎಂದು ಹೇಳಿದ್ರು.

ಕೊರೊನಾವನ್ನ ತಡೆಯಬೇಕು ಅಂತಾ ನಿರ್ಬಂಧಗಳನ್ನ ಹೇರಿದ್ರೆ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತೆ ಎಂಬ ಕಾರಣದಿಂದ ಪೊಲೀಸರು ನೈಟ್​ಕರ್ಫ್ಯೂ ಬಗ್ಗೆ ಹೆಚ್ಚಿನ ಉಮೇದಿ ತೋರಿಲ್ಲ. ಕೊರೊನಾ ವೈರಸ್​ ನಿಯಂತ್ರಣವನ್ನ ಕಡಿಮೆ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದ್ರು.

ಕರ್ಫ್ಯೂ ಹೇರೋದ್ರಿಂದ ನಗರದ ಜೀವನ ಹಾಗೂ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತೆ. ಹೀಗಾಗಿ ಸಾರ್ವಜನಿಕರು ಕೊರೊನಾ ವಿರುದ್ಧ ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಬಳಕೆಯಂತಹ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ರು.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಶಾಲೆಗಳು ತೆರೆದಿರೋದು ಸೂಕ್ತವೇ ಎಂಬ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಅಲಿ, ಈ ಬಗ್ಗೆ ಒಂದೆರಡು ದಿನಗಳಲ್ಲಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...